ಕೆಪಿಎಸ್‌ಸಿ ಪಶುವೈದ್ಯ ನೇಮಕಾತಿಯಲ್ಲಿ ಕೋಟಿ ಲಂಚದ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

ಕೆಪಿಎಸ್‌ಸಿ ಪಶುವೈದ್ಯ ನೇಮಕಾತಿಯಲ್ಲಿ ಕೋಟಿ ಲಂಚದ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯ ನೇಮಕಾತಿಯಲ್ಲಿ 1.5 ರಿಂದ 2 ಕೋಟಿ ರೂ. ಲಂಚ ಪಡೆದು ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಅಭ್ಯರ್ಥಿಗಳನ್ನು ಬೇರೆ ರಾಜ್ಯಕ್ಕೆ ಕರೆದೊಯ್ದು ಪ್ರಶ್ನೆಪತ್ರಿಕೆ ನೀಡಿ ತರಬೇತಿ ನೀಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಿಜೆಪಿ ನಿಯೋಗ ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷರನ್ನು ಭೇಟಿಯಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದೆ. ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆ ನಡೆಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

Source: Zee Kannada News

Read the live feed on ZapIndies