ರಾಮನಗರದ ಕರಗ ಮಹೋತ್ಸವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾಷಣಕ್ಕೆ ನಟ ದರ್ಶನ್ ಅಭಿಮಾನಿಗಳು 'ಡಿ ಬಾಸ್' ಘೋಷಣೆ ಕೂಗಿ ಅಡ್ಡಿಪಡಿಸಿದರು. ಆರಂಭದಲ್ಲಿ ತಾಳ್ಮೆಯಿಂದ ಮನವಿ ಮಾಡಿದರೂ ಘೋಷಣೆ ನಿಲ್ಲದಿದ್ದಕ್ಕೆ ರೊಚ್ಚಿಗೆದ್ದ ಸಿಎಂ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದರು. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಮತ್ತೆ ಭಾಷಣ ಮುಂದುವರಿಸಿದ ಸಿಎಂ, ಚಾಮುಂಡೇಶ್ವರಿ ತಾಯಿಯ ಬಳಿ ಪ್ರಾರ್ಥನೆ ಮಾಡಿದ್ದಾಗಿ ಹೇಳಿದರು.
ಡಿ ಬಾಸ್ ಘೋಷಣೆಗೆ ಸಿಎಂ ಡಿಕೆಶಿ ಭಾಷಣ ಅರ್ಧಕ್ಕೆ ನಿಲ್ಲಿಸಿದರು
Source: Zee Kannada News
Read the live feed on ZapIndies