ಕಾವೇರಿ ನೀರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, 'ಬಂದ್ ಇಲ್ಲ' ಎಂದು ಘೋಷಣೆ ಕೂಗಿದರು. ರಾಜ್ಯದ ನೀರಿನ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿದರೂ, ಬಂದ್ನಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು.
ಕಾವೇರಿ ಬಂದ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಪ್ರತಿಭಟನೆ
Source: Zee Kannada News