ಅಕಾಲಿ ದಳದ ಮುಖ್ಯಸ್ಥ ಮತ್ತು ಪಂಜಾಬ್ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ನಿಹಾಂಗ್ ವ್ಯಕ್ತಿಯೊಬ್ಬ ಕಿರ್ಪಾನ್ನಿಂದ ದಾಳಿ ನಡೆಸಿದ್ದಾನೆ. ದಾಳಿಕೋರನನ್ನು ವಶಕ್ಕೆ ಪಡೆಯಲಾಗಿದ್ದು, ಬಾದಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಕೈಗೆ ಗಾಯವಾಗಿದ್ದು, ಜೀವಕ್ಕೆ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಇದು ಅವರ ಮೇಲಿನ ಎರಡನೇ ದಾಳಿಯಾಗಿದೆ.
ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಬಾದಲ್ ಮೇಲೆ ನಾಂದೇಡ್ನಲ್ಲಿ ಹಲ್ಲೆ
Source: Vishwavani