ಕರ್ನಾಟಕ ಸಚಿವ ಸಂಪುಟವು 'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಇದರಿಂದ ಆರ್ಎಸ್ಎಸ್ ಸೇರಿದಂತೆ ಯಾವುದೇ ಖಾಸಗಿ ಸಂಘ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಹೈಕೋರ್ಟ್ ತಡೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾಯಿದೆ ಜಾರಿಗೆ ಸರ್ಕಾರ ಮುಂದಾಗಿದೆ.
ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಪರ್ಮಿಷನ್ ಕಡ್ಡಾಯ: ವಿಧೇಯಕಕ್ಕೆ ಸಂಪುಟ ಅನುಮೋದನೆ
Source: Asianet Suvarna News