ಸಿಂಟಗಾಲೂರು ಏತ ನೀರಾವರಿ ಯೋಜನೆಗೆ ಜಮೀನು ನೀಡಿದ ರೈತರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿ ವಾಹನ ಜಪ್ತಿಗೆ ಕೋರ್ಟ್ ಆದೇಶಿಸಿದೆ. 2024ರಲ್ಲಿ ಎಕರೆಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶವಾಗಿತ್ತು. ಆದರೆ ಎರಡು ವರ್ಷ ಕಳೆದರೂ ಪಾವತಿಯಾಗಿಲ್ಲ. ಹೀಗಾಗಿ ರೈತರು ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಡಿಸಿ ಕಚೇರಿಯಲ್ಲಿ ವಾಹನ ಜಪ್ತಿ ಪ್ರಕ್ರಿಯೆ ನಡೆದಿದೆ.
ಗದಗ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ
Source: Zee Kannada News