ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ಟಿಎಂಸಿ ಹಿರಿಯ ನಾಯಕ ಆಶಿಸ್ ಬ್ಯಾನರ್ಜಿ ಅವರು ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನಲ್ಲಿರುವ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಎನ್ನಲಾದ ದಾಖಲೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು 2001ರಿಂದ 2026ರವರೆಗೆ ರಾಮ್ಪುರಹಾಟ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಟಿಎಂಸಿ ಕಚೇರಿಯಲ್ಲಿ ಮಾಜಿ ಸಚಿವ ಆಶಿಸ್ ಬ್ಯಾನರ್ಜಿ ಆತ್ಮಹತ್ಯೆ
Source: Eesanje