ಬೆಂಗಳೂರಿನ ಆಗರ–ಸರ್ಜಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ರಾತ್ರಿ 11.30ರ ಸುಮಾರಿಗೆ ನಡೆದ ಘಟನೆಯಲ್ಲಿ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಇಳಿದಿದ್ದರಿಂದ ಪ್ರಾಣಾಪಾಯವಾಗಿಲ್ಲ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸಪಟ್ಟಿದ್ದು, ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಗಿತ್ತು.
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಕಾರಿಗೆ ಬೆಂಕಿ, ಪ್ರಯಾಣಿಕರು ಪಾರು
Source: Zee Kannada News